Breaking News

ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ

Spread the love

ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ.

 

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳು, 1988ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಂತೆ ಇನ್ಮುಂದೆ ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧದ ದೂರನ್ನು ದಾಖಲಿಸುವಂತೆ ಸೂಚಿಸಿದ್ದಾರೆ. ಈ ಮೂಲಕ ಲೋಕಾಯುಕ್ತಕ್ಕೆ ಫವರ್ ನೀಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ