Breaking News

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

Spread the love

ಲಬುರಗಿ: 545 ಪಿಎಸ್‌ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ.

ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.

 

ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌

ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಅವಲೋಕಿಸಿ ಕೊನೆಗೂ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.‌


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ