Breaking News

ಪೊಲೀಸರ ಸೋಗಿನಲ್ಲಿ ಲಕ್ಷಾಂತರ ರೂ. ಗಾಂಜಾ ಸಾಗಿಸುತ್ತಿದ್ದ ಖದೀಮರ ಬಂಧನ

Spread the love

ನಿಮ್ಮ ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದಿರಿ ಎಂದು ಪೊಲೀಸರ ಸೋಗಿನಲ್ಲಿ ತಪಾಸಣೆ ಮಾಡಿದ ಖದೀಮರು ಗಾಡಿಯಲ್ಲಿದ್ದ 4,79,250 ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದರು. ಸಧ್ಯ ಈ ಆರೋಪಿಗಳನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ರಾಮತೀರ್ಥನಗರದ ನಿವಾಸಿ ಅತಾವುಲ್ಲಾ ಮಹಮ್ಮದ್‍ಹಯಾತ್ ಹೊನಗೇಕರ್ ಹಣ ಕಳೆದುಕೊಂಡ ವ್ಯಕ್ತಿ. ಬಳಿಕ ಇವರು ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಕಿತ್ತೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ 70 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ 1 ಇಂಡಿಕಾ ಕಾರು ಹಾಗೂ 2 ಬೈಕ್‍ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ಕೃತ್ಯಕ್ಕೆ ಪತ್ರಕರ್ತರ ನಕಲಿ ಗುರುತಿನ ಚೀಟಿಯನ್ನು ಇವರು ಬಳಕೆ ಮಾಡಿಕೊಂಡಿದ್ದು ಬಹಿರಂಗೊಂಡಿದೆ. ಆ ನಕಲಿ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡಿಎಸ್‍ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಕಿತ್ತೂರು ಸಿಪಿಐ ಮಹಾಂತೇಶ ಹೊಸಪೇಟಿ, ಪಿಎಸ್‍ಐಗಳಾದ ಹಣಮಂತ ಧರ್ಮಟ್ಟಿ, ಕೆ.ಎಂ.ಕಲ್ಲೂರ, ಪ್ರವೀಣ ಕೋಶಿ ನೇತೃತ್ವದ ತಂಡವು ಈ ಆರೋಪಿಗಳನ್ನು ಬಂಧಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ