ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.
ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. ಗ್ರಾಮದಲ್ಲಿ ಇಲ್ಲಿಯವರೆಗೆ ಒಂದೇ ಒಂದು ಕೋಮು ಘರ್ಷಣೆ ಕಂಡಿಲ್ಲ. ಸಣ್ಣಪುಟ್ಟ ಘಟನೆಗಳು ನಡೆದರೆ ಎರಡೂ ಸಮುದಾಯದ ಹಿರಿಯರು ಒಟ್ಟಾಗಿ ಕುಳಿತು ಪರಿಹರಿಸುತ್ತಾರೆ.
ರಂಜಾನ್ ಮತ್ತು ಇತರ ಮುಸ್ಲಿಂ ಹಬ್ಬಗಳಲ್ಲಿ ಇಲ್ಲಿ ಹಿಂದೂಗಳೂ ಭಾಗವಹಿಸುತ್ತಾರೆ. ರಾಜ್ಯದ ಇತರ ಭಾಗಗಳಲ್ಲಿ ಹಿಜಾಬ್, ಗಣೇಶ ದಂಗಲ್ ಮತ್ತು ಇತರ ಕೋಮು ಗಲಭೆಗಳನ್ನು ನಾವು ಕಾಣುತ್ತೇವೆ, ಕೇಳಿದ್ದೇವೆ. ಆದರೆ ನಮ್ಮ ಗ್ರಾಮದಲ್ಲಿ ಅಂತಹ ಘಟನೆಗಳು ಸಂಭವಿಸಲು ನಾವು ಬಿಡುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.