Breaking News

ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

Spread the love

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾವ್​ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ.

 

‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್​ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್​ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು ಕೂಡ ಬೆಳಗಾವಿಯಲ್ಲಿ ಪ್ರತಿಭಟನೆ ಮಾಡಲು ಹೋಗುವಾಗಲೂ ನಮ್ಮನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ ಕರ್ನಾಟಕದಲ್ಲಿ ಆಗಿತ್ತು.

ಅಮಿತ್​ ಶಾ ಅವರ ಮನೆ ಬಳಿ ಹೋದಾಗ ನಮ್ಮನ್ನು ಥಾಣಾ ಪೊಲೀಸ್​ ಠಾಣೆಗೆ ಕರೆದೊಯ್ದಿದರು. ಬೇಡ ಮೇಡಂ ಎಂದು ಅವರು ಮನವಿ ಮಾಡಿದ್ರು. ಆಗ ನಾನು ಎಫ್​ಐಆರ್ ಪ್ರತಿ ಕೊಟ್ಟು ನನಗೆ ಆಗಿರುವ ಅನ್ಯಾಯದ ಬಗ್ಗೆ ವಿವರಿಸಿದೆ. ರಾಜ್ಯದಲ್ಲಿ ಅದರಲ್ಲೂ ಬೆಳಗಾವಿ ಪೊಲೀಸ್​ ಇಲಾಖೆಯು ಪ್ರಕರಣದ ದಿಕ್ಕು ತಪ್ಪಿಸುತ್ತಿದೆ. ರಾಜಕುಮಾರ್ ಟಾಕಳೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಯನ್ನ ಬಂಧಿಸಿಲ್ಲ. ಹಾಗಾಗಿ ಪೊಲೀಸ್​ ಇಲಾಖೆಯ ವೈಫಲ್ಯವನ್ನ ಖಂಡಿಸಿ ಹೈಯರ್​ ಮಟ್ಟದಲ್ಲಿ ನ್ಯಾಯ ಕೇಳಲು ದೆಹಲಿಗೆ ಆಗಮಿಸಿದ್ದೇನೆ ಎಂದು ವಿವರಿಸಿದರು.

ರಾಜಕುಮಾರ್​ ಟಾಕಳೆ ಒಬ್ಬ ಅತ್ಯಾಚಾರ ಕೇಸ್​ನ ಆರೋಪಿ. ನನ್ನ ಖಾಸಗಿ ವಿಡಿಯೋ ಹರಿಯಬಿಟ್ಟು ಮಾನಹಾನಿ ಮಾಡಿದ್ದಾನೆ. ಆದರೂ ಈತನನ್ನು ಬಂಧಿಸಿಲ್ಲ. ಇನ್ನು ನಟೋರಿಯಸ್​, ಟೆರರಿಸ್ಟ್​ಗಳನ್ನು ಹೇಗೆ ಬಂಧಿಸ್ತಾರೆ? ಎಂದು ಪೊಲೀಸ್​ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ ನವ್ಯಶ್ರೀ, ಆರೋಪಿಯ ಬಂಧನ ಆಗದೆ ಇರೋದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗ್ತಿದೆ ಎಂದರು.

ಅಮಿತ್​ ಶಾ ಅವರನ್ನು ಭೇಟಿಯಾಗಲು ಅವಕಾಶ ಸಿಕ್ಕಿದೆ. ಆದರೆ ಇನ್ನೂ ದಿನಾಂಕ ನಿಗದಿ ಆಗಿಲ್ಲ. ನವ್ಯಶ್ರೀಗೆ ಆದತಂಹ ಅನ್ಯಾಯ ಇನ್ಯಾವ ಹೆಣ್ಣಿಗೂ ಆಗಬಾರದು. ಪ್ರತಿಯೊಬ್ಬರು ದೆಹಲಿಗೆ ಬಂದು ನ್ಯಾಯ ಪಡೆಯುವ ಸ್ಥಿತಿ ನಿರ್ಮಾಣ ಆಗಬಾರದು. ರಾಜ್ಯದಲ್ಲೇ ನ್ಯಾಯ ಸಿಗುವಂತಾಗಬೇಕು ಎಂದರು.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ