Breaking News

ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದ ಕಾಂಗ್ರೆಸ್‌

Spread the love

ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ.

ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ.

 

ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ.

ನಿವೇಶನ ಹಂಚಿಕೆಯಲ್ಲೂ ಅಕ್ರಮ ಎಸಗಿ ಗೃಹ ಸಚಿವರಿಗೆ ಹಾಗೂ ಬಿಜೆಪಿ ಶಾಸಕರಿಗೆ ಬಿಡಿಎ ಮೂಲಕ ಅನುಕೂಲ ಮಾಡಿಕೊಟ್ಟಿತ್ತು ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ.

ಬೆಂಗಳೂರಿನ ಅಭಿವೃದ್ಧಿಗೆ ಗಮನ ಹರಿಸದ ಬಿಡಿಎ, ಬಿಜೆಪಿ ಭ್ರಷ್ಟರ ಜೊತೆ ಸೇರಿ ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಡಾವಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರಿಗೆ ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಹಂಚಿಕೆ ಮಾಡಿದ್ದ ಬದಲಿ ನಿವೇಶನಗಳನ್ನು ಹಿಂಪಡೆಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿರುವುದಕ್ಕೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿಗೆ ಒಳಗಾಗಿರುವ ಬಿಡಿಎ, ಅಂತಹ ನಿವೇಶನ ಮಂಜೂರಾತಿಗಳನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ.

ಆರಗ ಜ್ಞಾನೇಂದ್ರ, ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಮುಖಂಡ ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಡಾ.ಎಂ. ನಾಗರಾಜ್‌ ಸೇರಿದಂತೆ ಹಲವರಿಗೆ ನೋಟಿಸ್‌ ಜಾರಿಗೊಳಿಸಿದೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ