Breaking News

ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ

Spread the love

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆಗೆ ಬಿಜೆಪಿ ಸಜ್ಜುಗೊಳ್ಳುತ್ತಿದೆ. ಶಿರಾ ಕ್ಷೇತ್ರದಲ್ಲಿ ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಇಲ್ಲಿಯೂ ಕಮಲವನ್ನು ಅರಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದಿಲ್ಲ ಎಂದು ವಿರೋಧ ಪಕ್ಷದವರು ಬೊಬ್ಬೆಹೊಡೆದಿದ್ದರು. ನಮ್ಮನ್ನ ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ದ ಪರಿಣಾಮ, ಕೆ.ಆರ್.ಪೇಟೆಯಲ್ಲಿ 10 ಸಾವಿರ ಮತಗಳ ಅಂತದಿಂದ ಗೆಲುವು ಸಾಧಿಸಿದ್ದೇವು. ಅದೇ ರೀತಿ ಶಿರಾದಲ್ಲೂ ಗೆಲುವು ಸಾಧಿಸುತ್ತೇವೆ. ಬಿಜೆಪಿ ಪಕ್ಷದಲ್ಲು ಯಾರೇ ಅಭ್ಯರ್ಥಿ ಆದರೂ ಕಣಕ್ಕಿಳಿಸಿದವರನ್ನು ಒಗ್ಗಟ್ಟಾಗಿ ಗೆಲ್ಲಿಸಿಕೊಡುತ್ತೇವೆ.


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ