ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು.
ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನೀಲ್ ಬೆನಕೆ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ್ಲ 18 ವಿಧಾನಸಭಾ ಕ್ಷೇತ್ರಗಳಲ್ಲಿ 18 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಬರುವಂತೆ ಪಕ್ಷದ ಕಾರ್ಯಕರ್ತರು ಕ್ರೀಯಾಶಿಲವಾಗಿ ದುಡಿಯುವಂತೆ ಕರೆ ನೀಡಿದರು.