ಸಂಗಮೇಶ್ವರ ನಗರದಲ್ಲಿ Sc St ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ ಉಪಹಾರ ಕೊಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದು,
ಅಲ್ಲಿ ಸುದ್ದಿ ತಿಳಿದ ತಕ್ಷಣ ಬೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಮಾಧಾನ ಹೇಳಿ, ಅವರ ಬೇಡಿಕೆಗಳಿಗೆ ಸ್ಪಂದಿಸಿ.. ಇದೆ ವೇಳೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಮಾನತು ಮಾಡಲು ಶಿಪಾರಸ್ಸು ಮಾಡಿ ನಿಯಮಾನುಸರ ಕ್ರಮಕ್ಕೆ ಸೂಚಿಸಲಾಗಿದೆ.
ನಂತರ ಜಿಲ್ಲಾಧಿಕಾರಿಗಳೊಂದಿಗೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ, ಅವರ ಮನವೊಲಿಸಿ, ಎಲ್ಲ ವಿದ್ಯಾರ್ಥಿಗಳ ಜೊತೆಯಲ್ಲಿ ಸಹಭೋಜನ ಮಾಡಿ, ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಯಿತು.