Breaking News

ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ: ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ NCPCR ನೋಟಿಸ್ ಜಾರಿ

Spread the love

ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ ಎನ್​​ಸಿಪಿಸಿಆರ್​ (NCPCR) ನೋಟಿಸ್ ಜಾರಿ ಮಾಡಲಾಗಿದೆ.

ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ. ಸುಮೊಟೊ ಕೇಸ್ ದಾಖಲಿಸಿಕೊಂಡು NCPCR ನೋಟಿಸ್​ ಹಿನ್ನೆಲೆ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ. ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಸಿಆರ್​ಪಿಸಿ 164ರಡಿ ಹೇಳಿಕೆ ದಾಖಲಿಸಿಕೊಂಡಿರುವ ವರದಿಯನ್ನು ಪೊಲೀಸರು ಜಡ್ಜ್​ಗೆ ಸಲ್ಲಿಸಲಿದ್ದಾರೆ. ಮುರುಘಾಶ್ರೀಗೆ ನೋಟಿಸ್ ನೀಡಿ ವಿಚಾರಣೆ ಸಾಧ್ಯತೆಯಿದ್ದು, ತನಿಖಾಧಿಕಾರಿ DySP ಅನಿಲ್ ನೇತೃತ್ವದಲ್ಲಿ ಬಂಧಿಸಿ ಕಾನೂನು ಕ್ರಮ ಸಾಧ್ಯತೆ ಎನ್ನಲಾಗುತ್ತಿದೆ.

ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

ಆ.29 ರಂದು ಬಾಲ ಮಂದಿರ ಬಳಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೂ ನೋಟಿಸ್ ನೀಡಿದ್ದು, ಮಕ್ಕಳ ಆಯೋಗದ ಅಧ್ಯಕ್ಷೆ ಜಯಶ್ರೀ ಆಗಮಿಸಿದ್ದ ವೇಳೆ ಪ್ರತಿಭಟನೆ ನಡೆಸಿದ ಹಿನ್ನೆಲೆ‌ ರಾಜ್ಯ ಮಕ್ಕಳ ಆಯೋಗದಿಂದ ಎಸ್ಪಿ ಕೆ.ಪರಶುರಾಮ್​ಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ