ಮೈಸೂರು: ನಿರುದ್ಯೋಗಿ ಯುವಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನ ಪೊಲೀಸ್ ಪೇದೆ ನೇಮಕಾತಿಗೆ ಕೇವಲ ಪಿಯುಸಿ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಬಹುದಿತ್ತು. ಈಗ ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಡಿಪ್ಲೊಮಾ, ಜೆಒಸಿ ಮತ್ತು ಐಟಿಐ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ.
ಈ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಭಾಷೆ ಅಥವಾ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಡಿಜಿಪಿ ಕಮಲ್ ಪಂತ್ ಆದೇಶಿಸಿದ್ದಾರೆ