Breaking News

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ

Spread the love

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ

ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

 

ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ಅವರು ಗರಂ ಆದರು.

ಪೆರಿಫೆರಲ್ ರಿಂಗ್ ರೋಡ್ ಗೆ ಆರು ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ