Breaking News
Home / ಜಿಲ್ಲೆ / ಬೆಳಗಾವಿ / ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

Spread the love

ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ.

ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು.

ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ.

ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ ಹೋಗಿದ್ದಾನೆ. ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡಾ ಸ್ಥಳಕ್ಕೆ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ