Breaking News

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

Spread the love

ಬೆಂಗಳೂರು : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ.

 

ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಆದರೆ. ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೀಗಾಗಿ ಅಕ್ಟೋಬರ್ ನಿಂದ ಪಡಿತರ ಚೀಟಿದಾರರಿಗೆ ರಾಜ್ಯದ ಪಾಲಿನ ತಲಾ 5 ಕೆಜಿ ಅಕ್ಕಿ ಮಾತ್ರ ಸಿಗಲಿದೆ.

 

ರಾಜ್ಯ ಸರ್ಕಾರದ ಪಡಿತರ ಆಹಾರ ಧಾನ್ಯ ಸೇರಿದಂತೆ ಕೇಂದ್ರ ಪಾಲಿನ ಅಕ್ಕಿ ಅಥವಾ ಗೋಧಿ ಸೇರಿ ಒಟ್ಟು ತಲಾ 10 ಕೆಜಿ (8 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ) ಆಹಾರ ಧಾನ್ಯವನ್ನು ಫಲಾನುಭವಿಗಳು ಸದ್ಯ ಪಡೆಯುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿರುವಂತೆ ಪಡಿತರ ಚೀಟಿದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿ ಸೆಪ್ಟೆಂಬರ್ ನಲ್ಲಿ ಅಂತ್ಯಗೊಳ್ಳಲಿದೆ. ಅಕ್ಟೋಬರ್ ನಿಂದ ಕೇಂದ್ರದ ಉಚಿತ ಅಕ್ಕಿ ಯೋಜನೆಯ ಲಾಭ ಸಿಗುವುದಿಲ್ಲ.ಹೀಗಾಗಿ ಇನ್ಮುಂದೆ ಪ್ರತಿ ಯುನಿಟ್ ಗೆ ಕೇವಲ 5 ಕೆಜಿ ಅಕ್ಕಿ ಮಾತ್ರ ಸಿಗಲಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ