Breaking News

‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’

Spread the love

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

 

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ( Teacher Day 2022 ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ ಅವರು, ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. ಅನುದಾನ ಬಜೆಟ್ ನಲ್ಲಿ ನೀಡಲಾಗಿದೆ. 19 ಸಾವಿರ ಕೋಟಿ ರೂ. ಶಿಕ್ಷಕರ ಸಂಬಳ, 5000 ಕೋಟಿ ರೂ. ಶಾಲೆಗಳ ಅಭಿವೃದ್ಧಿಗಾಗಿ ನೀಡಲಾಗಿದೆ. ಒಂದೇ ವರ್ಷದಲ್ಲಿ 8101 ಶಾಲಾ ಕೊಠಡಿಗಳನ್ನು ನಿರ್ಮಿಸುವ ರಾಜ್ಯದ ಇತಿಹಾಸದಲ್ಲೇ ಮೊದಲು. 23 ಸಾವಿರ ಶಾಲಾ ಕೊಠಡಿಗಳನ್ನು ಪುನ: ನಿರ್ಮಿಸಬೇಕಾಗಿದ್ದು, ಪ್ರಥಮ ಹಂತದಲ್ಲಿ 8101 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಉತ್ತಮ ಶಾಲೆಗಳಿದ್ದರು, ಉತ್ತಮ ಶಾಲಾ ಕೊಠಡಿಗಳು ಇಲ್ಲದಿದ್ದ ಕಾರಣ , ಈ ದಾಖಲೆಯ ಕಾರ್ಯಕ್ರಮವನ್ನು ಮಾಡಲಾಗಿದೆ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ