Breaking News
Home / ಜಿಲ್ಲೆ / ಬೆಂಗಳೂರು / ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

Spread the love

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ.

ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದರು. ಆರೋಪದ ಹಿನ್ನೆಲೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಅವರು ನ್ಯಾಯಾಲಯದಲ್ಲಿ ಕೋರಿದ್ದರು.

ಏನಿದು ಪ್ರಕರಣ: ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ಕೋರ್ಟ್​ಗೆ ದೂರು ನೀಡಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಜುಲೈ 8, 2021 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ದೂರು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದ್ದರು.. ಇಂದು ಈ ಬಗ್ಗೆ ತೀರ್ಪು ಪ್ರಕಟಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ