Breaking News
Home / ಜಿಲ್ಲೆ / ಚಿತ್ರದುರ್ಗ / ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!

ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!

Spread the love

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು.

 

ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಸಲಹೆ ನೀಡಿದರು.

ಶ್ರೀಗಳ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಸಂತ್ರಸ್ತರಿಗೆ ಮತ್ತು ವಿಶೇಷ ಸರ್ಕಾರಿ ಅಭಿಯೋಜಕಿ ನಾಗವೇಣಿ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಖಾಸಗಿ ವಕೀಲ ಶ್ರೀನಿವಾಸ್ ವಿಶೇಷ ಸರ್ಕಾರಿ ಅಭಿಯೋಜಕರನ್ನು ಬೆಂಬಲಿಸಲು ಅರ್ಜಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಸ್ಪೋಟಕ ಸಂಗತಿಗಳು ಬಹಿರಂಗ

Spread the love ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಅನಿಲ್‌ ನೇತೃತ್ವದಲ್ಲಿ ಪ್ರಕರಣದ ತನಿಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ