ಕಲಬುರಗಿ: ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನದ ಪ್ರಯುಕ್ತ ಬುಧವಾರ ರಾಜ್ಯದಾದ್ಯಂತ ಸರ್ಕಾರ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮಾಡದಂತೆ ಸೂಚನೆ ನೀಡಿತ್ತು. ಆದರೂ, ಶಹಾಬಾದ್ನಲ್ಲಿ ಆಯೋಜಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ವೇದಿಕೆ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
Laxmi News 24×7