Breaking News

ಮಹಾ ಮಳೆಗೆ ಮುಂಬೈನ ರಸ್ತೆಗಳೇ ಮಾಯ-

Spread the love

ಮುಂಬೈ: ಮಂಗಳವಾರ ರಾತ್ರಿ ಸುರಿದ ಮಳೆದ ವಾಣಿಜ್ಯ ನಗರಿ ಮುಂಬೈನ ರಸ್ತೆಗಳೇ ಮಾಯವಾಗಿದ್ದು, ತಗ್ಗು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ನಗರದ ಬಹುತೇಕ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಅಡಿಯವರೆಗೆ ನೀರು ನಿಂತಿದೆ.

ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗ್ಗೆಯವರೆಗೆ ಸುರಿದಿದೆ. ಮುಂದಿನ 24 ಗಂಟೆಯೂ ಸಹ ಭಾರೀ ಮಳೆಯಾಗಲಿದೆ. ಈ ವಾರ ನಗರದಲ್ಲಿ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಬುಧವಾರದ ನಂತರ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ರಾತ್ರಿಯ ಮಳೆ ಮುಂಬೈ ನಿವಾಸಿಗಳ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

 

ರೈಲು ಹಳಿಗಳ ಮೇಳೆ ಮಳೆ ನೀರು ನಿಂತಿದ್ದು, ಟ್ರೈನ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಮಳೆ ಪರಿಣಾಮ ಭುವನೇಶ್ವರ ವಿಶೇಷ ರೈಲು ಇಂದು ರಾತ್ರಿ 10 ಗಂಟೆಗೆ ಹೊರಡಲಿದೆ. ಹಾಗೆ ಗದಗ-ಮುಂಬೈ-ಗದಗ, ಹೈದರಾಬಾದ್- ಮುಂಬೈ ರೈಲುಗಳನ್ನು ತಾತ್ಕಲಿಕವಾಗಿ ರದ್ದುಗೊಳಿಸಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ