Breaking News

ಉಮೇಶ್ ಕತ್ತಿ ಮಗನಾದರೂ ಸಿಎಂ ಆಗಲಿ: ಶ್ರದ್ಧಾಂಜಲಿ ಸಭೆಯಲ್ಲಿ ಈಶ್ವರಪ್ಪ ಆಶಯ

Spread the love

ಶಿವಮೊಗ್ಗ: ಮುಖ್ಯಮಂತ್ರಿಯಾಗಬೇಕೆಂಬ ಕನಸು ಮಾಜಿ ಸಚಿವ ಉಮೇಶ್ ಕತ್ತಿ ಅವರಲ್ಲಿತ್ತು. ನಾನಲ್ಲದಿದ್ದರೆ ನನ್ನ ಮಗನಾದರೂ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದರು. ಸಿಎಂ ಆಗುವ ಅವರ ಕನಸು ಈಡೇರುವ ಮುನ್ನವೇ ನಮ್ಮನ್ನು ಅಗಲಿದ್ದಾರೆ. ಅವರ ಮಗನಾದರೂ ಭವಿಷ್ಯದಲ್ಲಿ ಸಿಎಂ ಆಗಲಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಶಿಸಿದರು.

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಉಮೇಶ್ ಕತ್ತಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಪದೇಪದೆ ಉಮೇಶ್ ಕತ್ತಿ ಹೇಳುತ್ತಿದ್ದರು. ಅದನ್ನು ಅವರು ಗಂಭೀರವಾಗಿ ಹೇಳುತ್ತಿದ್ದರೋ ಅಥವಾ ತಮಾಷೆ ಮಾಡುತ್ತಿದ್ದರೋ ಎಂಬುದು ಕೊನೆಗೂ ತಿಳಿಯಲೇ ಇಲ್ಲ ಎಂದರು.

ಉಮೇಶ್ ಕತ್ತಿ ಸ್ನೇಹಜೀವಿಯಾಗಿದ್ದರು. ಕ್ಷೇತ್ರದಲ್ಲಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದರು. ನೊಂದವರಿಗೆ ಸಹಾಯಹಸ್ತ ನೀಡುತ್ತಿದ್ದರು. ಎಲ್ಲರ ಜೊತೆಗೆ ಹಾಸ್ಯ ಪ್ರಜ್ಞೆಯಿಂದ ವರ್ತಿಸುವ ವ್ಯಕ್ತಿತ್ವ ಅವರದ್ದಾಗಿತ್ತು. ಪಕ್ಷಾತೀತವಾಗಿ ಆತ್ಮೀಯರನ್ನು ಕತ್ತಿ ಹೊಂದಿದ್ದರು ಎಂದು ಹೇಳಿದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ