Breaking News

ಬಿಪಿಎಲ್‌ ಪಡಿತರ ಪಡೆಯಲು ಇನ್ನು ಡಬಲ್‌ ಒಟಿಪಿ ಬೇಕು..

Spread the love

ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದ್ಯಮ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು.

ಆದರೆ, ಇನ್ನು ಮುಂದೆ ಸೆಪ್ಟೆಂಬರ್‌ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು.

ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ ಕಿರಿಕಿರಿಯೂ ಆಗಬಹುದು ಸರ್ವರ್‌ ಸಮಸ್ಯೆ ಕೂಡ ಉಂಟಾಗಬಹುದು. ಆದರೆ, ಎರಡು ಬಾರಿ ಒಟಿಪಿ, ಬೆರಳಚ್ಚು ಮಾತ್ರ ನೀಡಲೇಬೇಕು. ಇದರಿಂದ ವಿಳಂಬ ಕೂಡಾ ಆಗಬಹುದು. ಆದರೆ ಈ ವಿಧಾನ ಅನುಸರಿಲೇ ಬೇಕು.

ಈ ಹಿಂದೆ ಎಷ್ಟು ಅಕ್ಕಿ ಸಿಗುತ್ತಿತ್ತೋ ಅಷ್ಟೇ ಅಕ್ಕಿ ಎಲ್ಲರಿಗೂ ಸಿಗಲಿದೆ. ಅಕ್ಕಿ ಅಥವಾ ಆಹಾರ ಧಾನ್ಯದ ಹಂಚಿಕೆಯ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಈ ಸಂಬಂಧ ಏನೇ ಮಾಹಿತಿಗೂ ಸಾರ್ವಜನಿಕರು ೧೯೬೭ ಅಥವಾ ೧೪೪೪೫ ಕರೆ ಮಾಡಮಾಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ