Breaking News

ಉಮೇಶ್‌ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ

Spread the love

ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು.

ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು.

ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, ತಿನಿಸುಗಳನ್ನು ಇಡಲಾಯಿತು. ಜೊತೆಗೆ ಸಮಾಧಿ ಮೇಲೆ ಅವರಿಗೆ ಇಷ್ಟವಾದ ಗುಟ್ಕಾ ಪ್ಯಾಕೇಟ್ ಇಟ್ಟು ನಮನ ಸಲ್ಲಿಸಲಾಯಿತು. ಇಂದು ಕೂಡ ಅವರ ಮನೆಗೆ ಅಭಿಮಾನಿಗಳು ದಂಡೇ ಹರಿದು ಬರುತ್ತಿದೆ.


Spread the love

About Laxminews 24x7

Check Also

ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ

Spread the love ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ