Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಉಮೇಶ್‌ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ

ಉಮೇಶ್‌ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ

Spread the love

ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು.

ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು.

ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, ತಿನಿಸುಗಳನ್ನು ಇಡಲಾಯಿತು. ಜೊತೆಗೆ ಸಮಾಧಿ ಮೇಲೆ ಅವರಿಗೆ ಇಷ್ಟವಾದ ಗುಟ್ಕಾ ಪ್ಯಾಕೇಟ್ ಇಟ್ಟು ನಮನ ಸಲ್ಲಿಸಲಾಯಿತು. ಇಂದು ಕೂಡ ಅವರ ಮನೆಗೆ ಅಭಿಮಾನಿಗಳು ದಂಡೇ ಹರಿದು ಬರುತ್ತಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ