Breaking News

ಹಾನಿ ಪರಿಶೀಲನೆ: ಕೇಂದ್ರ ತಂಡಕ್ಕೆ ಹಾನಿ ಮನವರಿಕೆ: ಡಿಸಿ ನಿತೇಶ್ ಪಾಟೀಲ್

Spread the love

ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ(ಸೆ.10) ಪರಿಶೀಲನೆ ನಡೆಸಿತು.

ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕರಾದ ಅಶೋಕ ಕುಮಾರ್ ವಿ. ಅವರ ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ಧಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ವಿ.ವಿ.ಶಾಸ್ತ್ರಿ ಹಾಗೂ ಕರ್ನಾಟಕ ‌ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಅವರು ಜತೆಗಿದ್ದರು.

ಬೆಳಗಾವಿಯಿಂದ ಪ್ರವಾಸ ಆರಂಭಿಸಿದ ಕೇಂದ್ರ ತಂಡವು ಮೊದಲಿಗೆ ಯಳ್ಳೂರ ರಸ್ತೆಯಲ್ಲಿ ಭತ್ತದ ಬೆಳೆಹಾನಿಯನ್ನು ವೀಕ್ಷಿಸಿತು.

ಇದಾದ ಬಳಿಕ ಖಾನಾಪುರ ತಾಲ್ಲೂಕಿನ ಶಿಂಗಿನಕೊಪ್ಪ ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ‌ ಹಾನಿಯನ್ನು ಪರಿಶೀಲಿಸಿ, ಮಾಹಿತಿಯನ್ನು ಪಡೆದುಕೊಂಡರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ