Breaking News

ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

Spread the love

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು.

ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು.

ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ ಡಾನ್ಸ್​ ಮಾಡಿ ಖುಷಿಪಟ್ಟರು.

ಇನ್ನು ಜನಸ್ಪಂದನ ಸಮಾವೇಶಕ್ಕೆ ಬಸ್​ನಲ್ಲಿ ಆಗಮಿಸಿದ ಯುವಕರ ಪೈಕಿ ಕೆಲವರು ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಿಂತಿದ್ದ ಬಸ್​ನ ಮೇಲೇರಿ ಡಾನ್ಸ್​ ಮಾಡಿರುವ ವಿಡಿಯೋ ಕೂಡ ವೈರಲ್​ ಆಗಿದೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

Spread the love ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ