Breaking News

ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

Spread the love

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು.

ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು.

ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ ಡಾನ್ಸ್​ ಮಾಡಿ ಖುಷಿಪಟ್ಟರು.

ಇನ್ನು ಜನಸ್ಪಂದನ ಸಮಾವೇಶಕ್ಕೆ ಬಸ್​ನಲ್ಲಿ ಆಗಮಿಸಿದ ಯುವಕರ ಪೈಕಿ ಕೆಲವರು ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಿಂತಿದ್ದ ಬಸ್​ನ ಮೇಲೇರಿ ಡಾನ್ಸ್​ ಮಾಡಿರುವ ವಿಡಿಯೋ ಕೂಡ ವೈರಲ್​ ಆಗಿದೆ.


Spread the love

About Laxminews 24x7

Check Also

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the loveಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ