Breaking News

2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

Spread the love

ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

 

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್​ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ ಕಾಲ ನಮ್ಮದೇ ಪಾರುಪತ್ಯ ಇರುತ್ತದೆ ಎಂದು ಹೇಳಿದ್ದಾರೆ.

 

ನಿಖಿಲ್ ಕುಮಾರಸ್ವಾಮಿ ಅವರ ಮಾತಿನ ಬಗ್ಗೆ ವಿವರಣೆ ನೀಡಿದ ಪಕ್ಷದ ನಾಯಕರೊಬ್ಬರು. ಇದು ಕಷ್ಟಕಾರ್ಪಣ್ಯಗಳ ಕೊನೆ ಚುನಾವಣೆ ಆಗಬೇಕು ಎನ್ನುವುದರ ಬದಲು ನಿಖಿಲ್ ಅವರು ನಮ್ಮ ಪಾಲಿನ ಕೊನೆ ಚುನಾವಣೆ ಎಂದಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ