Breaking News

ನಿನ್ನಗಲಿಕೆ ನೋವು ಹೇಳತೀರದು – ಪ್ರೀತಿಯ ಸುಬ್ಬಿ ಸಾವಿಗೆ ಡಾಲಿ ಸಂತಾಪ

Spread the love

ಬೆಂಗಳೂರು: ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಖ್ಯಾತ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇವರ ಅಗಲಿಗೆ ನಟ ಧನಂಜಯ್ ಸಂತಾಪ ಸೂಚಿಸಿದ್ದಾರೆ.

ನಟ ಧನಂಜಯ್ ಇನ್‍ಸ್ಟಾಗ್ರಾಂನಲ್ಲಿ ಅವರ ಜೊತೆಗಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು ಸುಧಾಕರ್ ಅಣ್ಣ. ಇಂತಿ ನಿನ್ನ ಪ್ರೀತಿಯ ಡಾಲಿ” ಎಂದು ನೋವಿನಿಂದ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ನಟ ರಾಕ್‍ಲೈನ್ ಸುಧಾಕರ್ ಇಂದು ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಸುಧಾಕರ್ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ