Breaking News
Home / ಜಿಲ್ಲೆ / ಬೆಂಗಳೂರು / ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

Spread the love

ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ.

ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ.

 

2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದ ಹೊಬ್ಲೋಟ್ ವಾಚ್ ಉಡುಗೊರೆ ಪ್ರಕರಣವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ಬಿಜೆಪಿ ಶಾಸಕರು ಮುಂದಾಗಿದ್ದು, ಪ್ರಕರಣವನ್ನು
ಲೋಕಾಯುಕ್ತಕ್ಕೆ ವಹಿಸುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕರು ಒತ್ತಾಯಿಸುವ ಸಾಧ್ಯತೆ ಇದೆ.

ಇತ್ತೀಚೆಗೆ ರದ್ದಾದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಿದ್ದರಾಮಯ್ಯ ಅವರಿಗೆ ಕ್ಲೀನ್‍ಚಿಟ್ ನೀಡಿತ್ತು. 40% ಕಮಿಷನ್ ಆರೋಪದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ಸರ್ಕಾರವನ್ನು ಗುರಿಯಾಗಿಸುತ್ತಲೇ ಇರುವಾಗ, ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲು ಬಿಜೆಪಿ ಹರಸಾಹಸಪಡುತ್ತಿದೆ.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎಲ್ಲ ಹಗರಣಗಳನ್ನು ಬಿಜೆಪಿ ಬಯಲು ಮಾಡಲಿದೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ವಿರುದ್ಧ ಎಸಿಬಿ ಮುಂದೆ 29 ದೂರುಗಳು ದಾಖಲಾಗಿದ್ದರೂ ಎಫ್‍ಐಆರ್ ದಾಖಲಾಗಿಲ್ಲ ಎಂದು ಬಿಜೆಪಿ ವಿಧಾನಪರಿಷತ್ ಎನ್.ರವಿಕುಮಾರ್ ಹೇಳಿದ್ದಾರೆ. ಯಾರಾದರೂ ದುಬಾರಿ ವಾಚ್ ಉಡುಗೊರೆ ನೀಡಿದ ಹಿಂದಿನ ನಿಖರವಾದ ಕಾರಣ ನಮಗೆ ಯಾರಿಗೂ ತಿಳಿದಿಲ್ಲ. ಅದನ್ನು ರಾಜ್ಯದ ಖಜಾನೆಗೆ ಹಸ್ತಾಂತರಿಸಲಾಯಿತು. ಆದರೆ ಪ್ರಕರಣವನ್ನು ಅದರ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲಾಗಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ.

ಯಾರು ವಾಚ್ ಉಡುಗೊರೆ ನೀಡಿದರು ಮತ್ತು ಏಕೆ? ಇದು ಸ್ಪಷ್ಟವಾಗಬೇಕಿದೆ. ಅದರ ಹಿಂದೆ ಏನಾದರೂ ಕಾರಣವಿದೆಯೇ? ಯಾರಾದರೂ ಸಿಎಂಗೆ ದುಬಾರಿ ವಾಚ್ ಕೊಟ್ಟಿದ್ದು ಏಕೆ? ಇಂತಹ ಅನೇಕ ಉತ್ತರವಿಲ್ಲದ ಪ್ರಶ್ನೆಗಳಿವೆ. ನಾವು ಈ ಬಗ್ಗೆ ವಿವರವಾದ ತನಿಖೆ ಬಯಸುತ್ತೇವೆ ಎಂದು ಹೇಳಿರುವುದು ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ