Breaking News

ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Spread the love

ಉಪಸಭಾಪತಿ ಮತ್ತು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆರೋಗ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಸ್ವತಃ ಆನಂದ ಮಾಮನಿ ಸ್ಪಷ್ಟನೆ ನೀಡಿದ್ದು, ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಚೆನ್ನೈನ ಖಾಸಗಿ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆನಂದ ಮಾಮನಿ ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಅದರ ಜೊತೆಗೆ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿ ಕೆಲ ಮಾಧ್ಯಮಗಳಲ್ಲಿ ಬರ್ತಿದೆ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ. ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ