Breaking News

ಬೆಳಗಾವಿ: ಸಾವಿನಲ್ಲೂ ಒಂದಾದ ವೃದ್ದ ದಂಪತಿ

Spread the love

ಬೆಳಗಾವಿ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲ್ಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ.

ಅನಾರೋಗ್ಯದಿಂದ‌ ಬಳಲುತ್ತಿದ್ದ ಬಾಬಣ್ಣ ಅಣ್ಣಿಗೇರಿ(76) ಬುಧವಾರ ತಡರಾತ್ರಿ ಮೃತಪಟ್ಟರು.

ಈ ವಿಷಯ ಕೇಳಿದ ಪತ್ನಿ ಶಿವಬಸವ್ವ(70) ಕೆಲಹೊತ್ತಿನಲ್ಲೇ ಹೃದಯಾಘಾತಕ್ಕೀಡಾಗಿ ನಿಧನರಾದರು.

ಏಕಕಾಲಕ್ಕೆ ವೃದ್ಧ ದಂಪತಿ ಅಗಲಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇಂದು ಮಧ್ಯಾಹ್ನ 12 ಗಂಟೆಗೆ ಇಬ್ಬರ ಅಂತ್ಯಕ್ರಿಯೆಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ