Breaking News

ರಸ್ತೆ ದಾಟುವಾಗಲೇ 130 ಕಿ.ಮೀ ವೇಗದಲ್ಲಿ ಬಂದ ಕಾರು ಡಿಕ್ಕಿ: ಇಬ್ಬರು ಮಹಿಳಾ ಟೆಕ್ಕಿಗಳು ದುರ್ಮರಣ

Spread the love

ಚೆನ್ನೈ: ಇಬ್ಬರು ಮಹಿಳಾ ಟೆಕ್ಕಿಗಳು ರಸ್ತೆ ದಾಟುವಾಗ ತುಂಬಾ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಚೆನ್ನೈನ ಐಟಿ ಕಾರಿಡಾರ್​ನಲ್ಲಿ ನಡೆದಿದೆ.

ಎಸ್​. ಲಾವಣ್ಯ ಮತ್ತು ಆರ್​.

ಲಕ್ಷ್ಮೀ ಮೃತ ದುರ್ದೈವಿಗಳು. ಇಬ್ಬರಿಗೂ 23 ವರ್ಷ ವಯಸ್ಸಾಗಿತ್ತು. ಚೆನ್ನೈ ಎಚ್​ಸಿಎಲ್​ ಸ್ಟೇಟ್​ ಸ್ಟ್ರೀಟ್​ ಸರ್ವೀಸ್​ ಸಂಸ್ಥೆಯಲ್ಲಿ ವಿಶ್ಲೇಷಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಕೆಲಸ ಮುಗಿಸಿ ಬುಧವಾರ ರಾತ್ರಿ 11.30ಕ್ಕೆ ಮನೆಗೆ ಹಿಂದಿರುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗಲೇ ಹೋಂಡಾ ಸಿಟಿ ಕಾರು ಡಿಕ್ಕಿ ಹೊಡೆದಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರು ಚಾಲಕ 20 ವರ್ಷದ ಮೊತೀಶ್​ ಕುಮಾರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೇಪರ್​ ಪ್ಲೇಟ್ಸ್​ಗಳನ್ನು ತಯಾರು ಮಾಡುವ ತನ್ನ ತಂದೆಯೊಂದಿಗೆ ಮೊತೀಶ್​ ಕೆಲಸ ಮಾಡುತ್ತಿದ್ದನು. ಗಂಟೆಗೆ ಸುಮಾರು 130 ಕಿ.ಮೀ ವೇಗದಲ್ಲಿ ಮೊತೀಶ್ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ. ​

ಲಾವಣ್ಯ ಆಂಧ್ರಪ್ರದೇಶದ ಚಿತ್ತೂರಿನವರು ಮತ್ತು ಲಕ್ಷ್ಮಿ ಕೇರಳದ ಪಲಕ್ಕಾಡ್‌ನವರು. ಐಟಿ ಕಾರಿಡಾರ್ ಟೋಲ್ ರಸ್ತೆಯ ಅಕ್ಕಪಕ್ಕದಲ್ಲೇ ಟೆಕ್ ಕಂಪನಿಗಳು ಮತ್ತು ಬೃಹತ್ ವಸತಿ ಸಮುಚ್ಚಯವಿದೆ. ರಸ್ತೆಯಲ್ಲಿ ಸಾಕಷ್ಟು ಜೀಬ್ರಾ ಕ್ರಾಸಿಂಗ್‌ಗಳ ಕೊರತೆಯಿದೆ ಎಂದು ಹಲವರು ಅರೋಪಿಸಿದ್ದಾರೆ. ಪಾದಚಾರಿಗಳು ಟ್ರಾಫಿಕ್ ಮಧ್ಯೆಯೂ ಅಪಾಯಗಳನ್ನು ಲೆಕ್ಕಿಸದೇ ರಸ್ತೆಗಳನ್ನು ದಾಟುತ್ತಿರುವುದಾಗಿ ತಿಳಿದುಬಂದಿದೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ