Breaking News

ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ

Spread the love

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ.

ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು.

ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ಪದಗ್ರಹಣ ಮಾಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ