Breaking News

ಗಾಯನ ನಿಲ್ಲಿಸಿದ S.P.B. ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

Spread the love

ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು.

ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್‌–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್‌ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ.

ವಿಡಿಯೋ ಬಿಡುಗಡೆ ಮಾಡಿದ್ದ ಎಸ್‌ಪಿಬಿ ನನ್ನ ಆರೋಗ್ಯ ಸರಿ ಇರಲಿಲ್ಲ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶೀತ ಮತ್ತು ಜ್ವರ ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಬಳಿಗೆ ಚಿಕಿತ್ಸೆ ಪಡೆಯಲು ಮುಂದಾದೆ. ಪರೀಕ್ಷೆಯ ಬಳಿಕ ಕೊರೊನಾ ಸೋಂಕು ಸಣ್ಣ ಪ್ರಮಾಣದಲ್ಲಿರುವುದು ಗೊತ್ತಾಯಿತು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದರು. ಆದರೆ ಕುಟುಂಬದ ಸದಸ್ಯರು ಒಪ್ಪದ ಕಾರಣ ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯದ ಬಗ್ಗೆ ಯಾರೊಬ್ಬರು ಚಿಂತಿಸಬೇಕಿಲ್ಲ. ನನ್ನ ಆರೋಗ್ಯ ವಿಚಾರಿಸಲು ಮೊಬೈಲ್ ಕಾಲ್‌ ಮಾಡಬೇಡಿ. ಕಾಲ್‌ ಸ್ವೀಕರಿಸುವ ಸ್ಥಿತಿಯಲ್ಲಿ ನಾನಿಲ್ಲ. ಶೀತದ ಹೊರತಾಗಿ ನಾನು ಚೆನ್ನಾಗಿದ್ದೇನೆ. ಜ್ವರವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗುತ್ತೇನೆ ಎಂದು ಹೇಳಿದ್ದರು.

ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು. ಇವರ ಕಲಾ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು.

1946ರ ಜೂನ್‌ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ.

ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ