ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಮಂಕುಬೂದಿ ಎರಚಿದ ಕಿರಾತಕರು ಮಹಿಳೆಯಿಂದ ಬಂಗಾರದ ಮಾಗಲ್ಯದ ಸರ ಸೇರಿದಂತೆ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ಬೆಳಗಾವಿಯ ಆಜಾದ್ಗಲ್ಲಿಯಲ್ಲಿ ನಡೆದಿದೆ.
ಇಂದು ಶನಿವಾರ ಮಧ್ಯಾಹ್ನದ ವೇಳೆ ಆಜಾದ್ಗಲ್ಲಿಯಲ್ಲಿ ಮಹಿಳೆಯೊಬ್ಬಳು ಹೋಗುತ್ತಿದ್ದಳು ಈ ವೇಳೆ ಮಹಿಳೆಯನ್ನು ಹಸಿವೆಯಾಗಿದೆ ತಿನ್ನಲು ನಹಣ ಕೊಡುವಂತೆ ಕೇಳಿದ್ದಾರೆ.
ಈ ವೇಳೆ ಹಣ ನೀಡಿದ ಮಹಿಳೆಗೆ ಮೈ ಮೇಲೆ ಬಂಗಾರದ ಆಭರಣಗಳನ್ನು ಹಾಕಿಕೊಳ್ಳಬೇಡ. ಕಳ್ಳರು ಕದ್ದುಕೊಂಡು ಹೋಗಬಹುದು. ಹಾಗಾಗಿ ಅವುಗಳನ್ನು ತದುಕೊಡು ವಸ್ತ್ರದಲ್ಲಿ ಕಟ್ಟಿ ಕೊಡುತ್ತೇವೆಂದು ಹೇಳಿ ಆಭರಣಗಳನ್ನು ಪಡೆದಿದ್ದಾರೆ. ಈ ವೇಳೆ ಇನ್ನೊಂದು ವಸ್ತ್ರದಲ್ಲಿ ಕಟ್ಟಿದ್ದ ಉಸುಕನ್ನು ನೀಡಿ ಪರಾರಿಯಾಗಿದ್ದಾರೆ. ಇನ್ನು ಕಿರಾತಕರ ಈ ಕರಾಮತ್ತು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ವೇಳೆ ತನ್ನ ಅಳಲನ್ನು ತೋಡಿಕೊಂಡ ನೊಂದ ಮಹಿಳೆ ಲಕ್ಷ್ಮೀ ಸಿದ್ದಪ್ಪ ಪಾಟೀಲ್, ತನಗಾದ ಅನ್ಯಾಯವನ್ನು ಬಿಚ್ಚಿಟ್ಟಿದ್ದಾರೆ