Breaking News

ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿ ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ

Spread the love

ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.

ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ ಹಾಕಿದ್ದಾಳೆ. ಇದರಿಂದಾಗಿ ಕೆಲ ಹೊತ್ತು ಬಸ್ ಅಲ್ಲೇ ನಿಂತಿದೆ. ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ಸಹ ಸಂಭವಿಸಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರಿಗೂ ಮಹಿಳೆ ನಿಯಂತ್ರಣ ಸಾಧ್ಯವಾಗಿಲ್ಲ. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ಅಲ್ಲದೆ ಮಹಿಳೆಯ ರಾದ್ಧಾಂತ ನೋಡಿ ಜನ ಗಾಬರಿಯಾಗಿದ್ದಾರೆ. ಟ್ರಾಫಿಕ್ ಜಾಮ್ ಸಹ ಆಗಿದ್ದರಿಂದ ಪೊಲೀಸರಿಗೆ ನಿಯಂತ್ರಿಸುವುದು ಕಷ್ಟವಾಗಿದೆ. ಹೀಗಾಗಿ ಅಂತಿಮವಾಗಿ ಅಂಬುಲೆನ್ಸ್ ಕರೆಸಿ ಮಹಿಳೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ