Breaking News
Home / ರಾಜಕೀಯ / ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಸರ್ಕಾರಿ ನೌಕರರಿಗೆ ಬಿಗ್ ಶಾಕ್

Spread the love

ಬೆಂಗಳೂರು: ರಾಜ್ಯ ಸರ್ಕಾರದ ಅನೇಕ ಇಲಾಖೆಗಳ ನೌಕರರ ಅಂತರ್ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ.

ಕೆಲವು ಇಲಾಖೆಗಳ ಸಿ ಮತ್ತು ಡಿ ದರ್ಜೆಯ ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳ 16(ಎ) ರದ್ದುಗೊಳಿಸಲಾಗಿದ್ದು, ಇದರಿಂದಾಗಿ ನಿವೃತ್ತಿಯೊಳಗೆ ಬಯಸಿದ ಜಿಲ್ಲೆಗೆ ಅಥವಾ ಸ್ವಂತ ಜಿಲ್ಲೆಗೆ ವರ್ಗಾವಣೆ ಪಡೆಯುವ ಅವಕಾಶದಿಂದ ವಂಚಿತರಾಗುವಂತಾಗಿದೆ.

 

ಅಬಕಾರಿ, ಪೊಲೀಸ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ ಇಲಾಖೆಗಳಲ್ಲಿನ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ. ಪತಿ, ಪತ್ನಿ ಪ್ರಕರಣಗಳಿಗಾದರೂ ವಿಶೇಷ ವಿನಾಯಿತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಅಬಕಾರಿ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ನೌಕರರಲ್ಲಿ ಅನೇಕ ದಂಪತಿಗಳು ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಮಟ್ಟದ ಜೇಷ್ಠತೆ ಆಧಾರದಲ್ಲಿ ಸಿಗಬೇಕಿದ್ದ ವರ್ಗಾವಣೆ 16(ಎ) ರದ್ದಾಗಿರುವುದರಿಂದ ಅಂತರ್ ಜಿಲ್ಲಾ ವರ್ಗಾವಣೆ ಅವಕಾಶ ಕೈತಪ್ಪಿ ಹೋಗಿದೆ.

ಪ್ರಭಾವ ಬಳಸಿ ಸರ್ಕಾರಿ ನೌಕರರು, ಸಿಬ್ಬಂದಿ ವರ್ಗಾವಣೆಗೆ ದುಂಬಾಲು ಬೀಳುತ್ತಾರೆ. ವರ್ಗಾವಣೆ ನೆಪದಿಂದ ಸರ್ಕಾರಿ ಕೆಲಸಗಳು ವಿಳಂಬವಾಗುತ್ತವೆ. ಇಲಾಖೆಗಳ ಅಧಿಕಾರಿಗಳ ಮೇಲೆ ವರ್ಗಾವಣೆಗೆ ಒತ್ತಡ ಹಾಕಲಾಗುತ್ತದೆ. ಈ ಕಾರಣದಿಂದಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ 16(ಎ) ರದ್ದುಗೊಳಿಸಲಾಗಿದೆ. ಅಂತರ ಜಿಲ್ಲಾ ವರ್ಗಾವಣೆಗಿದ್ದ ಅವಕಾಶಕ್ಕೆ ಬ್ರೇಕ್ ಬಿದ್ದಿದೆ.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ