Breaking News

ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ

Spread the love

ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಒಳ್ಳೇ ಉದ್ದೇಶದಿಂದ ಅವರು ಹೇಳಿಕೆ ಕೊಟ್ಟಿರಬಹುದು. ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬರಬೇಕು. ಆ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಹೆಚ್ ಕೆ ಪಾಟೀಲ್ ಸೇರಿ ಎಲ್ಲರೂ ಒಟ್ಟಾಗಿ ಸೇರಿ ಚುನಾವಣೆಗೆ ಹೋಗಬೇಕು. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಅವೆಲ್ಲ ಮರೆತು ಚುನಾವಣೆ ಎದುರಿಸಬೇಕೆಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ