“ಎನ್ಕೌಂಟರ್ ಸ್ಪೆಷಲಿಸ್ಟ್ಗಳನ್ನ ಇಡ್ತಿದ್ದೆ”
ಹಾಡಹಗಲೇ ಹಿಂದೂಗಳನ್ನ ಹೊಡೀತಾರೆ.. ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಗೆ ಬೆಂಕಿ ಹಚ್ಚಿದ್ರು.. ಪೊಲೀಸರ ಕೈಯಲ್ಲಿ ಬಂದೂಕು ಕೊಟ್ಟಿದ್ದೀರಿ.. ಆದ್ರೆ, ಹೊಡೀಬೇಡ ಅಂತಾರೆ.. ನಾನು ಮುಖ್ಯಮಂತ್ರಿ ಆಗಿದ್ರೆ.. ಮೊದಲು ಹೊಡಿರಿ ಅಂತಿದ್ದೆ, ಹೊಡದವರಿಗೆ ಪ್ರಮೋಷನ್ ಕೊಡ್ತಿದ್ದೆ, ಪಿಸಿ ಇದ್ದವನನ್ನ ಎಎಸ್ಐ, ಪಿಎಸ್ಐ ಇದ್ದವನನ್ನ ಸಿಪಿಐ ಮಾಡ್ತಿದ್ದೆ,. ಅಲ್ದೆ, ಕರ್ನಾಟಕದ ತುಂಬ ಎನ್ಕೌಂಟರ್ ಸ್ಪೆಷಲಿಸ್ಟ್ ಗಳನ್ನ ಇಡುತ್ತಿದ್ದೆ..
“ನಾನು ಮುಖ್ಯಮಂತ್ರಿ ಆದ್ರೆ ಒಬ್ರನ್ನ ಜೈಲಿಗೆ ಕಳಸ್ತೇನೆ”
ನಾನು ಮತ್ತೊಬ್ಬ ಯೋಗಿ ಬಾಬಾ ಆಗ್ತಾನೆ ಅನ್ನೋ ಭಯ ಅವರಿಗೆ ಅನ್ನೋ ಮೂಲಕ ಹೆಸರು ಪ್ರಸ್ತಾಪಿಸಿದೇ, ಸ್ವಪಕ್ಷದ ಕೆಲ ನಾಯಕರ ಬಗ್ಗೆ ಅಸಮಾಧಾನ ಹೊರ ಹಾಕಿದ್ರು. ನಾನು ಅಪ್ಪಿತಪ್ಪಿ ಮುಖ್ಯಮಂತ್ರಿ ಆದ್ರೆ ಒಬ್ರನ್ನ ಜೈಲಿಗೆ, ಒಬ್ಬರನ್ನ ಕಾಡಿಗೆ ಕಳಿಸ್ತೇನೆ ಅಂತಾ ಹೇಳಿದ್ರು.. ಮೊನ್ನೆ ಮಹಾರಾಷ್ಟ್ರದಲ್ಲಿ ಪೊಲೀಸರು ಡಿಜೆ ಎದ್ರು ಕುಣಿದಿದಾರೆ.. ಮುಂದೆ ನಾನು ಮುಖ್ಯಮಂತ್ರಿಯಾದ್ರೆ ಎಲ್ಲರೂ ಕುಣಿಯೋಣ ಅಂತಾ ಹೇಳಿ ಮುಖ್ಯಮಂತ್ರಿ ಆಗುವ ಆಸೆಯನ್ನ ಮತ್ತೊಮ್ಮೆ ಹೇಳಿಕೊಂಡ್ರು.