Breaking News

ಯಾತ್ರೆ ನಡೆಯುವುದು ವ್ಯಕ್ತಿಯಿಂದಲ್ಲ, ಪಕ್ಷದಿಂದ: ಸ್ವಪಕ್ಷೀಯರಿಗೆ ಟಾಂಗ್ ನೀಡಿದ ದೇಶಪಾಂಡೆ

Spread the love

ಬೆಂಗಳೂರು: ಯಾವುದೇ ವ್ಯಕ್ತಿಯಿಂದ ರಥ ಯಾತ್ರೆ ನಡೆಯಲ್ಲ. ಪಕ್ಷದಿಂದ ರಥ ಯಾತ್ರೆ ನಡೆಯುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಪಕ್ಷದ ಹಿರಿಯ ನಾಯಕರ ವಿರುದ್ಧ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಥಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಅಧ್ಯಕ್ಷ, ಸಿಎಲ್ಪಿ ನಾಯಕ ಎಲ್ಲರೂ ಇರುತ್ತಾರೆ ಎಂದು ಹೇಳಿದರು.

 

ನಾವೆಲ್ಲ ಸಂಘಟಿತರಾಗಿ ಒಟ್ಟಾಗಿ ಚುನಾವಣೆಗೆ ಹೋಗುತ್ತೇವೆ. ಕೆಲವೊಂದು ಸಲಹೆಗಳು ಭಿನ್ನವಾಗಿ ಇರುತ್ತವೆ. ಹಾಗಂತ ಅದನ್ನು ಗೊಂದಲ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತಿದ್ದೇವೆ ಎಂದು ಹೇಳಿದರು.

ಅನವಶ್ಯಕ ಗೊಂದಲ ನಿರ್ಮಾಣ ಸರಿಯಲ್ಲ. ನನಗೆ ಜವಾಬ್ದಾರಿ ಕೊಟ್ಟಿಲ್ಲವೆಂದು ಯಾರು ಹೇಳಿದ್ದು? ಭಾರತ್ ಜೋಡೋದಲ್ಲಿ ಕೊಟ್ಟಿಲ್ಲವೆಂದು ಹೇಳಿದ್ದು ಯಾರು? ನನಗೆ ಚಿತ್ರದುರ್ಗದ ಜವಾಬ್ದಾರಿ ಕೊಟ್ಟಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆಯಲ್ಲಿ ಇರುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ