Breaking News
Home / ಜಿಲ್ಲೆ / ಬೆಂಗಳೂರು / ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ

ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ

Spread the love

ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್​ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು.

ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು.‌ ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ‌ ಮಸೂದೆಯನ್ನು ಪರಿಷತ್​​ನಲ್ಲಿ ವಿರೋಧಿಸಿದ್ದರು.

ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ 300 ಅಥವಾ ಅದಕ್ಕಿಂತ ಹೆಚ್ಚಿಗೆ ಉದ್ಯೋಗಿಗಳಿರುವ ಸಂಸ್ಥೆಗಳು ಮುಚ್ಚಲು, ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಲು ಸರ್ಕಾರದ ಅನುಮತಿ ಪಡೆಯಬೇಕಾಗಿತ್ತು.

ಅದಕ್ಕೂ ‌ಮೊದಲು 100ರ ಮಿತಿ ಇತ್ತು.ಜೊತೆಗೆ, ಉದ್ಯೋಗಿಗಳ ಒಟಿ (ಓವರ್ ಟೈಂ)ನ್ನು 75 ರಿಂದ 125 ತಾಸುಗಳಿಗೆ ಏರಿಕೆ ಮಾಡುವ ಪ್ರಸ್ತಾವನೆ ಹೊಂದಿತ್ತು. ಹಲವು ಕಾರ್ಮಿಕ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಿಜೆಪಿ ಸದಸ್ಯರು ಮೇಲ್ಮನೆಯಲ್ಲಿ ಈ ವಿಧೇಯಕದ ಬದಲಾವಣೆಗೆ ಆಗ್ರಹಿಸಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ