ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿಯು ಅತ್ಯವಶ್ಯವಾಗಿದೆ.ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರಾಟೆ ಮಾಸ್ಟರ್ ಜೀತೇಂದ್ರ ಕಾಕತಿಕರ್ ಹೇಳಿದ್ದಾರೆ.
ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು
ಈ ವೇಳೆ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷರಾದ ಗಜೇಂದ್ರ ಕಾಕತೀಕರ್ ಹಾಗೂ ಜೀತೇಂದ್ರ ಕಾಕತೀಕರ್ ಮಾತನಾಡಿ, ಸ್ಪರ್ಧೆಯ ಮಹತ್ವ ಹಾಗೂ ಪಾಲಕರು ಮಕ್ಕಳಿಗೆ ಕರಾಟೆ ತರಬೇತಿ ಕೊಡಿಸುವಂತೆ ತಿಳಿಸಿದರು