Breaking News

ನಾಳೆ ‌ಸದನದಲ್ಲೇ ಸಚಿವರೊಬ್ಬರ ಭ್ರಷ್ಟಾಚಾರ ದಾಖಲೆ ಸಮೇತ ಬಯಲು ಮಾಡುವೆ : ಎಚ್‌ಡಿಕೆ ಗುಡುಗು

Spread the love

ಲಬುರಗಿ : ಸಾರ್ವಜನಿಕ ಹಿತಾಸಕ್ತಿ ಬಲಿಕೊಟ್ಟು ಕಾನೂನು ಗಾಳಿಗೆ ತೂರಿ ಆಸ್ತಿಯನ್ನು ಮಾಡಿಕೊಂಡಿರುವ ರಾಜ್ಯದ ಸಚಿವರೊಬ್ಬರ ಹಗರಣದ ಭ್ರಷ್ಟಾಚಾರವನ್ನು ನಾಳೆ (ಗುರುವಾರ) ವಿಧಾನಸಭೆ ಅಧಿವೇಶನದಲ್ಲಿ ದಾಖಲೆಗಳ ಸಮೇತ ಬಿಡುಗಡೆಗೊಳಿಸಿ ಬಯಲಿಗೆಳೆಯಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

 

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಶೇ. 40 ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವವಾಗಿದೆ. ಈಗ ಬಿಡುಗಡೆ ಮಾಡುವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನಾಳಿನ ಸದನದಲ್ಲಿ ಇದಕ್ಕೆ ಸರ್ಕಾರ ಉತ್ತರ ನೀಡಲಿ. ನನ್ನನ್ನು ಕೆಣಕಿದವರಿಗೆ ಇದೊಂದು ಎಚ್ಚರಿಕೆ ಎಂದು ಗುಡುಗಿದರು.

ರೈತರ ಸಬ್ಸಿಡಿ ಹಣದಲ್ಲೂ ಪೆರ್ಸಂಟೇಜ್ ಪಡೆದಿರುವುದು ಹಾಗೂ ಸಚಿವರೊಬ್ಬರು ಸದನದಲ್ಲೇ ಅಧಿಕಾರಿ ತಮ್ಮ ಮಾತು ಕೇಳುತ್ತಿಲ್ಲ ಎನ್ನುವುದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದರು.

ಬಳಿಕ ಮಾತನಾಡಿದ ಅವರು ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ರಾಜಕೀಯ ಗಣ್ಯರು ಆರೋಗ್ಯ ವಿಚಾರಣೆ ಮಾಡಲು ಭೇಟಿಯಾಗುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ