Breaking News

ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

Spread the love

ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ.

ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ.

 

ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಹಾಗೂ ಪಕ್ಷದ ಕಾರ್ಯಕ್ರಮದಲ್ಲೇ ಬಹಿರಂಗವಾಗಿ ರಾಹುಲ್‌ಗಾಂಧಿಯವರ ಕಾರ್ಯಕ್ರಮಕ್ಕೆ ಜನರನ್ನು ಕಳುಹಿಸಿ ಎಂದರೆ ಸಾಧ್ಯವಿಲ್ಲ ಎಂದು ದೇಶಪಾಂಡೆ ಅವರು ಹೇಳಿದರು ಎಂದು ಡಿ.ಕೆ.ಶಿವಕುಮಾರ್‌ ಅಸಮಾಧಾನ ಹೊರಹಾಕಿದ್ದ ಬಗ್ಗೆ ಪಕ್ಷದ ಶಾಸಕರ ವಲಯದಲ್ಲಿ ಅಸಮಾಧಾನ ಉಂಟಾಗಿತ್ತು.

ಇದೇ ಸಂದರ್ಭದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಾರಿಗೆ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರನ್ನು ನೇಮಿಸಿ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ