ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು ರಚಿಸಿರುವ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ ಕಾನೂನಾತ್ಮಕವಾಗಿ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.