Breaking News

ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿದ ಕೆಪಿಸಿಸಿ ಜಾಲತಾಣ ಮುಖ್ಯಸ್ಥನ ಬಂಧನ! ಕಲಾಪ ಮುಂದೂಡಿಕೆ

Spread the love

ಬೆಂಗಳೂರು: ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಚೀಫ್ ಬಿ.ಆರ್ ನಾಯ್ಡು ಹಾಗೂ ಅರುಣ್ ಎನ್ನುವವರನ್ನು ಬುಧವಾರ ತಡರಾತ್ರಿ ಪೊಲೀಸರು ಬಂಧಿಸಿರುವುದು ಮೇಲ್ಮನೆಯಲ್ಲಿ ಗುರುವಾರ ವಾಗ್ವಾದ, ಗದ್ದಲಕ್ಕೆ ಕಾರಣವಾಯಿತು.

ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪದೇ ಪದೇ‌ ವಿನಂತಿಸಿದರೂ ಕಾಂಗ್ರೆಸ್​ನವರ ಧರಣಿ, ಎರಡೂ ಕಡೆಯವರ ಪರ-ವಿರೋಧ ಧಿಕ್ಕಾರದ ಮೊಳಗು, ಮಾತಿನ ಚಕಮಕಿ ನಿಲ್ಲಲಿಲ್ಲ.

ಇದರಿಂದಾಗಿ ಕಲಾಪವನ್ನು 10 ನಿಮಿಷ ಮುಂದೂಡಿದರು.

ಸದನ ಸೇರುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್​ಗೊಂದು ಬಿಜೆಪಿಗೊಂದು ಕಾನೂನೇ, ಚರ್ಚೆಗೆ ಅವಕಾಶ ಕೊಡಿ ಎಂದು ಪಟ್ಟು ಹಿಡಿದರು.

ಸದನದ ಕಾರ್ಯವಿಧಾನದಂತೆ ಮೊದಲಿಗೆ ಪ್ರಶ್ನೋತ್ತರ ನಡೆಯಲಿ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಆಡಳಿತ ಪಕ್ಷದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣ ಸ್ವಾಮಿ ಹೇಳುದರೆ, ತೇಜಸ್ವಿನಿಗೌಡ ಅವರು ಕಾನೂನು ಎಲ್ಲರಿಗೂ ಒಂದೇ ಎಂದರು.

ಕಾಂಗ್ರೆಸ್ ನವರು ಪಟ್ಟು ಬಿಡಲಿಲ್ಲ. ನೋಟಿಸ್ ಕೊಡಿ ಎಂಬ ಸಭಾಪತಿ ಸಲಹೆ ಕೇಳಲಿಲ್ಲ. ಪ್ರತಿಪಕ್ಷ ನಾಯಕ ಹರಿಪ್ರಸಾದ್ ಮತ್ತು ಆಡಳಿತ ಪಕ್ಷದ ಸದಸ್ಯರ ಮಧ್ಯೆ ಹೇಡಿಗಳು, ರಣಹೇಡಿಗಳು ಎಂಬ ಪರಸ್ಪರ ತಿವಿತ ನಡೆದರೆ, ಕಾಂಗ್ರೆಸ್ ನ ಸದಸ್ಯರು ಸಭಾಪತಿ ಪೀಠದ ಮುಂದೆ ಧಾವಿಸಿ ಧರಣಿ ಹೂಡಿದರು.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ