Breaking News

ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ

Spread the love

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ.

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದುಸ್ಮರಿಸಿಕೊಂಡಿದ್ದಾರೆಸಂತೋಷ್ ಜಾರಕಿಹೊಳಿ  .

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್‍ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ.


Spread the love

About Laxminews 24x7

Check Also

ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*

Spread the love ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ* : ವಿದ್ಯಾರ್ಥಿನಿಯರಿಗೆ ಅವಾಚ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ