Breaking News

P.D.O.ಗಳ ಮುಂಭಡ್ತಿಗೆ ಶೀಘ್ರ ಕ್ರಮ: C.M.

Spread the love

ಬೆಂಗಳೂರು: ರಾಜ್ಯದಲ್ಲಿ 12 ವರ್ಷಗಳಿಂದ ಪದೋನ್ನತಿ ಇಲ್ಲದೆ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಮುಂಭಡ್ತಿಗೆ ಶೀಘ್ರ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಅವರ ಪ್ರಶ್ನೆಗೆ ಲಿಖೀತ ರೂಪದಲ್ಲಿ ಪ್ರತಿಕ್ರಿಯಿಸಿದ ಅವರು, ಪಿಡಿಒಗಳು ಸುಮಾರು 12 ವರ್ಷಗಳಿಂದ ಒಂದೇ ಹುದ್ದೆಯಲ್ಲಿರುವುದು ಸರಕಾರದ ಗಮನಕ್ಕೆ ಬಂದಿದೆ. ಅವರನ್ನು ಸಹಾಯಕ ನಿರ್ದೇಶಕ ಹುದ್ದೆಗೆ ಭಡ್ತಿಗೊಳಿಸಲು ಶೀಘ್ರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಪಿಡಿಒ ಹುದ್ದೆಗಳು ಮಂಜೂರಾಗಿವೆ. ಇನ್ನು ಪ್ರಸ್ತುತ ಮಂಜೂರಾಗಿರುವ ಸಹಾಯಕ ನಿರ್ದೇಶಕರ ಹುದ್ದೆಗಳ ಸಂಖ್ಯೆ 452. ಈ ಪೈಕಿ 318 ಹುದ್ದೆಗಳು ಖಾಲಿ ಇವೆ. ಪಿಡಿಒ ವೃಂದದ ಜೇಷ್ಠತಾ ಪಟ್ಟಿ ಕುರಿತು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧದ ಪ್ರಕರಣ ಬಾಕಿ ಇದ್ದು, ಇತ್ಯರ್ಥಗೊಂಡ ಬಳಿಕ ನಿಯಮಾನುಸಾರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ