Home / ಜಿಲ್ಲೆ / ಬೆಳಗಾವಿ / ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

Spread the love

ಬೆಳಗಾವಿ: ಕೃಷಿ ಕಾರ್ಮಿಕರ ಮಕ್ಕಳಿಗೆ ಇದು ಸಂತಸದ ಸುದ್ದಿ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ‘ಮುಖ್ಯಮಂತ್ರಿ ರೈತ ವಿದ್ಯಾವಿಧಿ’ ಯೋಜನೆ ವಿಸ್ತರಿಸಲಾಗಿದೆ. ‍ಹಿಂದೆ ತಂದೆ- ತಾಯಿ ಅಥವಾ ಅಜ್ಜ- ಅಜ್ಜಿ ಹೆಸರಿನಲ್ಲಿ ಹೊಲ ಇದ್ದವರು ಮಾತ್ರ ಅರ್ಹರಾಗಿದ್ದರು.

ಪ್ರಸಕ್ತ (2022-23) ವರ್ಷದಿಂದ ಕೃಷಿ ಕಾರ್ಮಿಕರ ಮಕ್ಕಳೂ ಈ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು.

ರಾಜು ಕಡಕೋಳ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು, ಹೆಣ್ಣುಮಕ್ಕಳಿಗೆ 8ನೇ ತರಗತಿಯಿಂದಲೇ ‍ಪ್ರತಿ ವರ್ಷ ₹ 2,000 ನಿಧಿ ನೀಡಲಾಗುತ್ತದೆ. ಗಂಡುಮಕ್ಕಳಿಗೆ ಈ ಹಿಂದಿನಂತೆ ಪಿಯು ಮುಗಿದ ಬಳಿಕ ಸಿಗಲಿದೆ. ಶೀಘ್ರದಲ್ಲೇ ಇದರ ಅರ್ಜಿ ಕೂಡ ಕರೆಯಲಾಗುವುದು ಎಂದರು.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ