Breaking News

ಮಠಮಾನ್ಯಗಳಿಗೆ ಅನುದಾನ ನೀಡುವುದನ್ನು ಸರ್ಕಾರ ಬಿಡಲಿ: ಮರಿತಿಬ್ಬೇಗೌಡ

Spread the love

ವಿಧಾನಪರಿಷತ್ತು: ಸರ್ಕಾರ ದೇವಾಲಯ, ಪ್ರತಿಮೆ, ಮಠಗಳಿಗೆ ಹಾಗೂ ಜಾತಿ ಸಂಘಟನೆಗಳಿಗೆ ಸಾವಿರಾರು ಕೋಟಿ ರೂ.ಅನುದಾನ ನೀಡುವುದನ್ನು ಮೊದಲು ನಿಲ್ಲಿಸಲಿ. ಆ ಹಣವನ್ನು ಪ್ರವಾಹ ಸಂತ್ರಸ್ತರಿಗೆ ಬಳಕೆ ಮಾಡಿಕೊಳ್ಳಲಿ ಎಂದು ಜೆಡಿಎಸ್‌ನ ಮರಿತಿಬ್ಬೇಗೌಡ ಸರ್ಕಾರಕ್ಕೆ ಮನವಿ ಮಾಡಿದರು.

 

ನಿಯಮ 68ರ ಅಡಿಯಲ್ಲಿ ನಡೆದ ಅತಿವೃಷ್ಠಿ ಚರ್ಚೆಯ ವೇಳೆ ಮಾತನಾಡಿದ ಅವರು ಸರ್ಕಾರ ಈಗಾಗಲೇ ಮಠಗಳಿಗೆ ಮತ್ತು ಜಾತಿ ಸಂಘ-ಸಂಸ್ಥೆಗಳಿಗೆ ಕೋಟ್ಯಾಂತ ರೂ. ಅನುದಾನ ನೀಡುತ್ತಿದೆ. ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ದೂರಿದರು.

ಜನರು ನೀಡುವ ತೆರಿಗೆಯನ್ನು ಮಠಗಳಿಗೆ ನೀಡುವುದು ಒಳ್ಳೆಯದಲ್ಲ. ಒಂದು ವೇಳೆ ನೀವು ನೀಡಲೇಬೇಕು ಎಂಬುವುದಾದರೆ ಅದನ್ನು ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ನೀಡಿ. ಇದರಿಂದ ಮಕ್ಕಳ ಶಿಕ್ಷಣ ಕಲಿಕೆಗೆ ನೆರವಾಗಲಿದೆ. ಸರ್ಕಾರ ಮೊದಲ ಜಾತಿ ಸಂಘ ಸಂಸ್ಥೆಗಳಿಗೆ ಅನುದಾನ ನೀಡುವುದನ್ನು ಬಿಡಲಿ ಎಂದು ಸಲಹೆ ನೀಡಿದರು.

ಮಠ ಮಾನ್ಯಗಳಿಗೆ ಕೋಟ್ಯಾಂತ ರೂ. ಅನುದಾನ ನೀಡಿದರೆ ಚುನಾವಣೆ ವೇಳೆ ನಮಗೆ ಅನುಕೂಲವಾಗಬಹುದು ಎಂಬ ನಿರೀಕ್ಷೆ ಸರ್ಕಾರಕ್ಕೆ ಇರಬಹುದು. ಆದರೆ ಜನರು ಪ್ರಜ್ಞಾವಂತರಿದ್ದಾರೆ ಚುನಾವಣೆ ವೇಳೆ ಡುಮ್ಕಿ ಹೋಡಿಸ್ತಾರೆ ನೋಡಿ ಎಂದು ಎಚ್ಚರಿಸಿದರು. ಮಠ ಮಾನ್ಯಗಳಿಗೆ ಅನುದಾನ ನೀಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ